ಮುಂದಿನ ತಿಂಗಳಿಂದ ಪ್ರಚಾರಕ್ಕೆ ಹೋಗುವೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ. ಮೈಸೂರು,ಡಿಸೆಂಬರ್,1,2022(..):ರಾಜ್ಯ ವಿಧಾನಸಭಾ ಚುನಾವಣೆ ಐದಾರು ತಿಂಗಳಿದ್ದು ಈನಡುವೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಚುನಾವಣಾ ಅಖಾಡಕ್ಕಿಳಿದಿದ್ದಾರೆ. ಮುಂದಿನ ತಿಂಗಳಿಂದ ಪ್ರಚಾರಕ್ಕೆ ಹೋಗುವುದಾಗಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಮುಂದಿನ ತಿಂಗಳಿಂದ ಪ್ರಚಾರಕ್ಕೆ ಹೋಗುವೆ. ಎಚ್ ಡಿಕೆ ಪಂಚರತ್ನಯಾತ್ರೆ ಮಾಡುತ್ತಿದ್ದಾರೆ. ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಸೂಚನೆ ನೀಡಿದ್ದೇನೆ. ಶಾಸಕರು, ಮಾಜಿ ಶಾಸಕರಿಗೆ ಸಂಘಟನೆ ಜವಾಬ್ದಾರಿ ನೀಡಲಾಗಿದೆ ಎಂದರು. ಜೆಡಿಎಸ್ ಮೊಲದ ಪಟ್ಟಿ ಶಾಶ್ವತ ಅಲ್ಲ. ಪ್ರತಿ ದಿನ ಪಟ್ಟಿ ಬದಲಾವಣೆಯಾಗುತ್ತಿರುತ್ತದೆ. ಶಾಸಕ ಶೀವಲಿಂಗೇಗೌಡರ ಜೊತೆ ಹೆಚ್.ಡಿ ಕುಮಾರಸ್ವಾಮಿ ಮಾತನಾಡುತ್ತಾರೆ. ದ್ವಂದ್ವ ಇದೆ . ಇನ್ನೂ ಸಮಸ್ಯೆ ಬಗೆಹರಿದಿಲ್ಲ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು. : - –- - .