ಬಿಎಸ್ ವೈ ಮತ್ತು ನಿರಾಣಿ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಯು.ಯು ಲಲಿತ್. ನವದೆಹಲಿ,ಅಕ್ಟೋಬರ್,14,2022(..):ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ನಿರಾಣಿ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಯು.ಯು ಲಲಿತ್ ಅವರು ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಮ್ಮ ವಿರುದ್ಧದ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ಧರು. ದೀಪಾವಳಿ ಬಳಿಕ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದ್ದು, ತನ್ನ ಹೊರತಾದ ಪೀಠದಲ್ಲಿ ವಿಚಾರಣೆ ನಡೆಸಲು ಸಿಜೆಐ ಯುಯು ಲಲಿತ್ ಅವರು ಸೂಚನೆ ನೀಡಿದ್ದಾರೆ. ಮುಂದಿನ ತಿಂಗಳು ಸಿಜೆಐ ಯುಯು ಲಲಿತ್ ಅವರು ನಿವೃತ್ತರಾಗುವ ಹಿನ್ನೆಲೆ ಬೇರೆ ಪೀಠಕ್ಕೆ ವರ್ಗಾವಣೆ ಮಾಡಿದ್ದಾರೆ. ದೇವನಹಳ್ಳಿ ಕೈಗಾರಿಕ ಪ್ರದೇಶದಲ್ಲಿ 26 ಎಕರೆ ಡಿನೋಟಿಫೈ ಮಾಡಿದ ಆರೋಪ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಕೇಳಿಬಂದಿತ್ತು. ಈ ಸಂಬಂಧ ಕಾರ್ಯಕರ್ತ ಆಲಂ ಪಾಷ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. : - - – - – … : .. , 14, 2022 (..): .. ’ .. . ’ ’ . . ’ .. . .. . . 26 . ’ .: ’ / .. / / /