ಮೈಸೂರಿನ ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನಕ್ಕೆ ವಾರೆಂಟ್..! ಮೈಸೂರು, ಅ.01,2024: (..) : ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿಗೊಳಿಸಿದ ಮೈಸೂರು ನ್ಯಾಯಾಲಯ. ಇಲ್ಲಿನ ಮೂರನೇ ಹೆಚ್ಚುವರಿ ಸಿವಿಲ್‌ ಜಡ್ಸ್‌ ಮತ್ತು ಜೆಎಂಎಫ್ಸಿ ಕೋರ್ಟ್‌ ನಲ್ಲಿ ಇಂದು ನಡೆದ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೃರು ಹಾಜರಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಾಮೀನು ರಹಿತ ಬಂಧನಕ್ಕೆ ಆದೇಶಿಸಿದೆ. ಎನ್.ಕುಮಾರ್‌ ಎಂಬುವವರು ೩೦.೦೬. ೨೦೧೫ ರಲ್ಲಿ ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಿದ್ದು ಅದು ಎವಿಡೆನ್ಸ್‌ ಹಂತದಲ್ಲಿದ್ದು, ಇಂದು ವಿಚಾರಣೆಗೆ ದಿನಾಂಕ ನಿಗಧಿ ಪಡಿಸಲಾಗಿತ್ತು. ಆದರೆ ಇಂದಿನ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರು ಹಾಜರಾದ ಕಾರಣ ನ್ಯಾಯಾಲಯವು ಜಾಮೀನು ರಹಿತ ಬಂಧನ ಆದೇಶ ಹೊರಡಿಸಿ ಮುಂದಿನ ವಿಚಾರಣೆಯನ್ನು ನ. ೬ ಕ್ಕೆ ಮುಂದೂಡಿದರು. : - ̧, , , , ‌: -