ಎಸ್.ಸಿ ಮತ್ತು ಎಸ್ ಟಿ ಮೀಸಲಾತಿ ಹೆಚ್ಚಿಸಲು ಸರ್ವಪಕ್ಷ ಸಭೆಯಲ್ಲಿನಿರ್ಧಾರ. ಬೆಂಗಳೂರು,ಅಕ್ಟೋಬರ್,7,2022(..):ಎಸ್.ಸಿ ಮತ್ತು ಎಸ್ ಟಿ ಮೀಸಲಾತಿಯನ್ನ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಎಸ್ ಸಿ ಮತ್ತು ಎಸ್ ಟಿ ಮೀಸಲಾತಿ ಹೆಚ್ಚಳ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಿತು. ಸಭೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಮಾಜಿ ಸಿಎಂ ಹೆಚ್,ಡಿ ಕುಮಾರಸ್ವಾಮಿ, ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು. ಸಭೆ ಬಳಿಕ ಮಾತನಾಡಿ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಜಾತಿ ಜನಸಂಖ್ಯಾವಾರು ಮೀಸಲಾತಿ ಬಗ್ಗೆ ಸಂವಿಧಾನ ಹೇಳಿದೆ. ಸಂವಿಧಾನ ಆಶಯದಂತೆ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ಎಸ್ .ಸಿ ಮತ್ತು ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ನಾಗಮೋಹನ್ ದಾಸ್ ಸಮಿತಿ ವರದಿ ನೀಡಿದೆ. ಎಸ್.ಸಿ ಮೀಸಲಾತಿ ಶೇ. 15ರಿಂದ ಶೇ 17ಕ್ಕೆ ಹಾಗೂ ಎಸ್ ಟಿ ಮೀಸಲಾತಿ ಶೇ.3 ರಿಂದ ಶೇ.7ಕ್ಕೆ ಹೆಚ್ಚಿಸಲು ನಿರ್ಧಾರ ಮಾಡಿದ್ದೇವೆ. ಸರ್ವಪಕ್ಷಗಳ ಸಹಮತದಿಂದ ಮೀಸಲಾತಿ ಹೆಚ್ಚಿಸಲು ನಿರ್ಧರಿಸಲಾಗಿದೆ. ನಾಳೆಯೇ ಸರ್ಕಾರದ ಅಧಿಕೃತ ಮುದ್ರೆ ಒತ್ತುತ್ತೇವೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. ಸರ್ವ ಪಕ್ಷ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನ ಸಂಪುಟದಲ್ಲಿ ಇರಿಸಿ ನಾಳೆಯೇ ಅನುಮೋದಿಸಿ ಆದೇಶ ಪ್ರಕಟಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. : - - – - –- … / , 7, 2022 (..): . , . , .. , . . , . , . , 15% 17% 3% 7% . . , .: / / /