ಬೆಂಗಳೂರಿನಲ್ಲಿ ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರ ಉದ್ಘಾಟಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್. ಬೆಂಗಳೂರು,ಸೆಪ್ಟಂಬರ್,1,2022(..):ಬೆಂಗಳೂರಿನ ನೆಲಮಂಗಲ ಬಳಿ ನಿರ್ಮಾಣವಾಗಿರುವ ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಉದ್ಙಘಾಟಿಸಿದರು. 20 ಎಕರೆ ಪ್ರದೇಶದಲ್ಲಿ 93 ಕೋಟಿ ರೂ ವೆಚ್ಚದಲ್ಲಿ ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರ ನಿರ್ಮಾಣವಾಗಿದ್ದು, 400 ಜನರಿಗೆ ಶುಶ್ರೂಷೆ ನೀಡಬಹುದಾಗಿದೆ. ಒತ್ತಡ ನಿವಾರಣೆ ಜೊತೆ ಆರೋಗ್ಯಕ್ಕಾಗಿ ಈ ಪ್ರಕೃತಿ ಚಿಕಿತ್ಸಾ ಕೇಂದ್ರ ನಿರ್ಮಿಸಲಾಗಿದೆ. ಇಂದು ಸಿಎಂ ಯೋಗಿ ಆದಿತ್ಯನಾಥ್ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಧರ್ಮಸ್ಥಳದ ಧರ್ಮಾಧಿಕಾರಿ ನಿರ್ಮಲಾನಂಧನಾಥಧ ಶ್ರೀಗಳು ಹಾಗೂ ಸಚಿವರು ಭಾಗಿಯಾಗಿದ್ದರು. : - - –- -