ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ ಜಯ. ಬೆಳಗಾವಿ,ಜೂನ್,15,2022(..):ವಿಧಾನಪರಿಷತ್ ನ ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ಈ ಮಧ್ಯೆ ಕಾಂಗ್ರೆಸ್​ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಪ್ರಕಾಶ್ ಹುಕ್ಕೇರಿ 4 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದು, ಒಟ್ಟು 10 ಸಾವಿರಕ್ಕೂ ಹೆಚ್ಚು ಮತಪಡೆದಿದ್ದಾರೆ ಎನ್ನಲಾಗಿದೆ. ಈ ಮೂಲಕ ಗೆಲುವು ಸಾಧಿಸಿದ್ದು ಅಧಿಕೃತ ಘೋಷಣೆ ಬಾಕಿ ಇದೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಅರುಣ್ ಶಹಪುರಗೆ ಸೋಲಾಗಿದೆ. : - – – - -