ರಾಜ್ಯದಲ್ಲಿ ತೈಲಬೆಲೆ ಇಳಿಸುವ ಬಗ್ಗೆ ಚರ್ಚೆಯಾಗಿಲ್ಲ- ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಮೇ,28,2022(..):ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಈ ನಡುವೆ ರಾಜ್ಯದಲ್ಲಿ ತೈಲಬೆಲೆ ಇಳಿಸುವ ಬಗ್ಗೆ ಚರ್ಚೆಯಾಗಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಿಎಂ, ಪೆಟ್ರೋಲ್ ಬೆಲೆ ಇಳಿಕೆ ಬಗ್ಗೆ ಇನ್ನೂ ಯಾವುದೇ ಚರ್ಚೆ ಆಗಿಲ್ಲ. ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ಹಿಜಾಬ್ ವಿವಾದ ಮಾಡುವ ಅಗತ್ಯವಿಲ್ಲ. ಎಲ್ಲರೂ ಹಿಜಾಬ್ ಬಗ್ಗೆ ಕೋರ್ಟ್ ನೀಡಿರುವ ಆದೇಶ ಪಾಲಿಸಬೇಕು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಗಮನ ಕೊಡಿ ಎಂದು ಸಿಎಂ ಬೊಮ್ಮಾಯಿ ಸಲಹೆ ನೀಡಿದರು. : - - –- - .