ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧ್ಯವೇ ಇಲ್ಲ- ಮಾಜಿ ಸಂಸದ ಕೆ.ಎಚ್ ಮುನಿಯಪ್ಪ. ನವದೆಹಲಿ,ಮಾರ್ಚ್,14,2022(..):ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧ್ಯವೇ ಇಲ್ಲ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ನುಡಿದಿದ್ದಾರೆ. ನವದೆಹಲಿಯಲ್ಲಿ ಇಂದು ಮಾತನಾಡಿದ ಕೆ.ಎಚ್ ಮುನಿಯಪ್ಪ, ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಸಾಧ್ಯವಿಲ್ಲ. ಇದು ಕಳೇದ ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ಮೈತ್ರಿ ಇಲ್ಲದಿದ್ದರೇ ಕಾಂಗ್ರೆಸ್ 10 ರಿಂದ 15 ಜೆಡಿಎಸ್ 2 ರಿಂದ ಮೂರು ಸ್ಥಾನ ಗೆಲ್ಲುಯತ್ತಿದ್ದವು. ಮೈತ್ರಿಯಿಂದ ಎಲ್ಲಾಕಡೆ ಸೋಲಬೇಕಾಯಿತು ಎಂದರು. ಕಾಂಗ್ರೆಸ್ ನಲ್ಲಿ ಆಂತರಿಕ ಜಗಳಕ್ಕೆ ಆಸ್ಪದ ಕೊಡಲ್ಲ. ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಒಟ್ಟಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಹರಿಪ್ರಸಾದ್ ನೇಮಕದಿಂದ ಮತ್ತಷ್ಟು ಬಲ ಬಂದಿದೆ ಎಂದು ಕೆ.ಎಚ್ ಮುನಿಯಪ್ಪ ತಿಳಿಸಿದರು. : --