ಅಗ್ನಿ ಅವಘಡದಲ್ಲಿ 7 ಮಂದಿ ದುರ್ಮರಣ… ನವದೆಹಲಿ,ಮಾರ್ಚ್,12,2022(..):ನಿನ್ನೆ ತಡರಾತ್ರಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 7 ಮಂದಿ ಸಾವನ್ನಪ್ಪಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಗೋಕಲ್​ ಪುರಿಯಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಈ ಘಟನೆಯಲ್ಲಿ ಏಳುಮಂದಿ ಮೃತಪಟ್ಟಿದ್ದಾರೆ. ಹಾಗಯೇ ಬೆಂಕಿಯ ಕೆನ್ನಾಲಿಗೆಗೆ ಗುಡಿಸಲುಗಳು ಸುಟ್ಟು ಕರಕಲಾಗಿವೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿ ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅಗ್ನಿಶಾಮಕ ದಳ ಸುಮಾರು 13 ಟೆಂಡರ್ ​ಗಳು ಸ್ಥಳಕ್ಕೆ ತೆರಳಿ, ಬೆಂಕಿ ನಂದಿಸಿವೆ ಎಂದು ದೆಹಲಿ ಈಶಾನ್ಯ ವಲಯ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ದೇವೇಶ್ ಕುಮಾರ್​ ಮಾಹಿತಿ ನೀಡಿದ್ದಾರೆ. : 7 - -