ಸರ್ಕಾರಿ ವೈದ್ಯರು ಖಾಸಗಿ ಕಂಪನಿ ಹೆಸರಿನ ಔಷಧಿ ಬರೆದರೆ ಕ್ರಮ – ಆರೋಗ್ಯ ಸಚಿವ ಡಾ ಸುಧಾಕರ್ ಎಚ್ಚರಿಕೆ. ಮೈಸೂರು,ಮಾರ್ಚ್,7,2022(..):ಸರ್ಕಾರಿ ವೈದ್ಯರು ಖಾಸಗಿ ಕಂಪನಿ ಹೆಸರಿನ ಔಷಧಿ ಬರೆದರೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಜನೌಷಧ ಎಲ್ಲಾ ರೀತಿಯಲ್ಲೂ ಪರಿಣಾಮಕಾರಿಯಾಗಿದೆ. ಜೊತೆಗೆ ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತಿದೆ. ಕೆಲವರು ಮಾತ್ರ ಇದನ್ನ ಬಳಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಮಟ್ಟಕ್ಕೆ ಜನೌಷಧವನ್ನ ತೆಗೆದುಕೊಂಡು ಹೋಗಲಾಗವುದು. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಜನೌಷಧ ಲಭ್ಯವಿರುವಂತೆ ನೋಡಿಕೊಳ್ಳಲಾಗುವುದು. ಜನೌಷಧ ಬಳಕೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೇ ಸ್ಥಾನದಲ್ಲಿ ಇದೆ. ಮುಂದೆ ಮೊದಲ ಸ್ಥಾನ ಪಡೆಯಲು ಇನ್ನೂ ಹೆಚ್ಚಿನ ಕೇಂದ್ರ ತೆರಯಲಾಗುವುದು. ಕೆಲವರು ಧರಸಿಲು ಬ್ರಾಂಡೆಡ್ ಬಟ್ಟೆಯೇ ಬೇಕು ಅಂತಹವರು ಬೇರೆ ಬ್ರಾಂಡ್ ಔಷಧಿ ಖರೀದಿ ಮಾಡುತ್ತಿದ್ದಾರೆ ಎಂದು ಸಚಿವ ಸುಧಾಕರ್ ತಿಳಿಸಿದರು. : - - -. …. . . : . . , 7, 2022 (..): . . . , . . . “ . . . ,” . . “ . , ,” .: . . / / -