ರಾಜ್ಯಾದ್ಯಂತ ಪ್ರವಾಸ: ಮತ್ತೆ ಬಿಜೆಪಿಯನ್ನ ಅಧಿಕಾರಕ್ಕೆ ತರುತ್ತೇವೆ- ಸಿಎಂ ಬಿಎಸ್ ಯಡಿಯೂರಪ್ಪ. ಬೆಂಗಳೂರು,ಮಾರ್ಚ್,5,2022(..):ರಾಜ್ಯಾದ್ಯಂತ ನಾನು ಪ್ರವಾಸ ಮಾಡುತ್ತೇನೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಶಿಕಾರಿಪುರದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ಪ್ರವಾಸ ಮಾಡುತ್ತೇವೆ. ಕಾಂಗ್ರೆಸ್ ಅಧಿಕಾರದ ಕನಸು ಕಾಣುತ್ತಿದೆ. ಆದರೆ ಮತ್ತೆ ಬಿಜೆಪಿಯನ್ನ ಅಧಿಕಾರಕ್ಕೆ ತರುತ್ತೇವೆ ಎಂದರು. ಸಿಎಂ ಬಸವರಾಜ ಬೊಮ್ಮಾಯಿ ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ. ಶಿಕಾರಿಪುರವನ್ನ ಮಾದರಿ ತಾಲ್ಲೂಕು ಮಾಡುವ ಗುರಿ ಹೊಂದಾಲಾಗಿದೆ. ಶಿಕಾರಿಪುರದ ಜನರ ಋಣ ತೀರಿಸಲು ಆಗುವುದಿಲ್ಲ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು. : - - - .