ಎಂಇಎಸ್ ವಿರುದ್ಧ ಕಠಿಣ ಕ್ರಮದ ಅಗತ್ಯ: ನಿಷೇಧದ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವೆ- ವಿಪಕ್ಷ ನಾಯಕ ಸಿದ್ಧರಾಮಯ್ಯ. ಬೆಳಗಾವಿ,ಡಿಸೆಂಬರ್,20,2021(..):ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿ ಪುಂಡಾಟಿಕೆ ಮೆರೆದಿರುವ ಎಂಇಎಸ್ ವಿರುದ್ಧ ಕಠಿಣ ಕ್ರಮ ಅಗತ್ಯ. ಎಂಇಎಸ್ ನಿಷೇಧದ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಆನಗೋಳದ ಕನಕದಾಸ ಕಾಲೋನಿಯಲ್ಲಿ ಪ್ರತಿಮೆ ಹಾನಿಯಾದ ಸ್ಥಳಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ನೂತನವಾಗಿ ಪ್ರತಿಮೆ ಪ್ರತಿಷ್ಠಾಪಿಸಿದ ಸ್ಥಳಕ್ಕೆ ಸಿದ್ಧರಾಮಯ್ಯ ಭೇಟಿ ನೀಡಿ ಸಂಗೊಳ್ಳಿ ರಾಯಣ್ಣನಿಗೆ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಸಿದ್ಧರಾಮಯ್ಯ, ಎಂಇಎಸ್ ನವರು ಪುಂಡರು, ಯಾವುದೇ ಭಯವಿಲ್ಲ. ಎಂಇಎಸ್ ವಿರುದ್ಧ ಕಠಿಣಕ್ರಮದ ಅಗತ್ಯವಿದೆ. ಎಂಇಎಸ್ ವಿರುದ್ಧ ಪ್ರತಿಭಟನೆಗೆ ಅವಕಾಶ ಕೊಡವೇಕು. ಎಂಇಎಸ್ ಬ್ಯಾನ್ ಮಾಡುವುದಕ್ಕೆ ಒತ್ತಾಯವಿದೆ. ಈ ಬಗ್ಗೆ ನಾನು ಅಧಿವೇಶನದಲ್ಲಿ ಚರ್ಚಿಸುತ್ತೇನೆ . ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ. ಈ ಸರ್ಕಾರದಲ್ಲಿ ಗುಪ್ತಚರ ಇಲಾಖೆ ಸತ್ತು ಹೋಗಿದೆ. ಪೊಲೀಸರ ಬಗ್ಗೆ ಭಯವಿಲ್ಲ, ಕಾನೂನು ಸುವ್ಯವಸ್ಥೆ ಸರಿಯಲ್ಲ ಎಂದು ಸಿದ್ಧರಾಮಯ್ಯ ಕಿಡಿಕಾರಿದರು. … : – , 20, 2021 (..): , . , . .“ . . . . . . . , , ,” .: / / : - - –- - -.