ಸುಸ್ಥಿರ ಪರಿಸರ ಅಭಿವೃದ್ಧಿಗೆ ಜಿಯೋಸ್ಟೇಷಿಯಲ್ ವರದಾನ: ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಮೈಸೂರು, 06 ಡಿಸೆಂಬರ್, 2021 (..):ಜಿಯೋಸ್ಪೇಷಿಯಲ್ ತಂತ್ರಜ್ಞಾನವು ಶೈಕ್ಷಣಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ನಡುವೆ ಮಾಹಿತಿ ಮತ್ತು ಜ್ಞಾನದ ವಿನಿಮಯಕ್ಕೆ ಪ್ರಮುಖ ಕಾರ್ಯವಿಧಾನವಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು. ಮಾನಸ ಗಂಗೋತ್ರಿಯ ಭೂಗೋಳ ಶಾಸ್ತ್ರ ವಿಭಾಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ನ್ಯಾಷನಲ್ ಜಿಯೋಸ್ಪೇಷಿಯಲ್ ಪ್ರೋಗ್ರಾಮ್‌ ಅಡಿ ಆಯೋಜಿಸಿದ್ದ ಒಂದು ದಿನ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದು ಜಿಯೋಸ್ಪೇಷಿಯಲ್ ತಂತ್ರಜ್ಞಾನ ಹಾಗೂ ಅಪ್ಲಿಕೇಶನ್ ಜಾಗತಿಕ ಮಟ್ಟದಲ್ಲಿ ಮಾಹಿತಿ ವಿನಿಮಯಕ್ಕೆ ರಚನೆಯಾಗಿದೆ. ತಂತ್ರಜ್ಞಾನಗಳಲ್ಲಿ ಸಕ್ರಿಯವಾಗಿರುವ ಅಂತರರಾಷ್ಟ್ರೀಯ ವೈಜ್ಞಾನಿಕ ಸಂಸ್ಥೆಗಳನ್ನು ಇದರ ಸದ್ಬಳಕೆಗೆ ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು. ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳು ಪ್ರಗತಿಯಾದಂತೆ ಹೊಸ ಹೊಸ ವ್ಯವಹಾರಗಳ ಸೃಷ್ಟಿ ಮತ್ತು ಬಳಕೆದಾರರ ನೆಲೆಯನ್ನು ಪೂರೈಸಲು ಜಿಯೋಸ್ಪೇಷಿಯಲ್ ಮಾಹಿತಿ ವರದಾನವಾಗಿದೆ. ಜೊತೆಗೆ ಕೆಲವು ನಿರ್ಣಾಯಕ ಸವಾಲುಗಳನ್ನು ಎದುರಿಸುತ್ತಿದೆ. ಹಾಗಾಗಿ ಸ್ಥಳೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನೆರವಾಗುವಂತೆ ಇದನ್ನು ಇನ್ನೂ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿ ಪಡಿಸಬೇಕಿದೆ. ಮಾಹಿತಿಯ ಸಮಗ್ರ ನಿರ್ವಹಣೆ ಮತ್ತು ಪ್ರಸರಣ ಬಗ್ಗೆ ಆಲೋಚಿಸಬೇಕಿದೆ ಎಂದರು. ವೇಗವಾಗಿ ವಿಕಸನಗೊಳ್ಳುತ್ತಿರುವ ಐಟಿ ಕ್ಷೇತ್ರವು ಪರಿಸರಕ್ಕೆ ಹಲವು ಸವಾಲುಗಳನ್ನು ಒಡ್ಡುತ್ತದೆ. ಈ ನಿಟ್ಟಿನಲ್ಲಿ ಸುಸ್ಥಿರ ಪರಿಸರ ಅಭಿವೃದ್ಧಿಗಾಗಿ ಹಾಗೂ ಹಲವು ಸಮಸ್ಯೆಗಳನ್ನು ಪರಿಹರಿಸಲು ಜಿಯೋಸ್ಪೇಷಿಯಲ್ ವರದಾನವಾಗಿದೆ. ಇತ್ತೀಚಿನ ದಿನಗಳಲ್ಲಿ ಜಿಯೋಸ್ಪೇಷಿಯಲ್ ತಂತ್ರಜ್ಞಾನಗಳನ್ನು ಬಳಸಿಕೊಂಡು ಭಾರತ ಸರ್ಕಾರ ಗತಿ ಶಕ್ತಿ ಮಾಸ್ಟರ್ ಪ್ಲಾನ್‌ನಂತಹ ಯೋಜನೆಗಳನ್ನು ರೂಪಿಸಿದೆ. 200 ಕ್ಕೂ ಹೆಚ್ಚು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಯನ್ನು ಮ್ಯಾಪಿಂಗ್ ಮಾಡಲಾಗಿದೆ ಎಂದರು. ನೀರಿನ ಸಂಪನ್ಮೂಲಗಳ ಮೌಲ್ಯಮಾಪನ, ಪ್ರವಾಹ ನಿರ್ವಹಣೆ, ಜಲಾಶಯದ ಕಾರ್ಯಾಚರಣೆ, ಬರ ನಿರ್ವಹಣೆ ಮಾಡಲುಜಿಯೋಸ್ಪೇಷಿಯಲ್ ಅಗತ್ಯ ನೆರವು ನೀಡುತ್ತದೆ. ಉಪಕರಣಗಳ ವ್ಯವಸ್ಥೆ ಮಾಡಲು ಕೂಡ ಇದು ಸಹಕಾರಿ ಎಂದರು. ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ಜಿಐಎಸ್ ವಿಭಾಗದ ಮುಖ್ಯಸ್ಥ ರಾದ ಪ್ರೊ.ರಾಮು, ಭೂಗೋಳ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಜಯಶ್ರೀ, ಪ್ರೊ.ಬಾಲಸುಬ್ರಹ್ಮಣ್ಯಂ ಹಾಗೂ ಡಾ.ರೇಖಾ ಇದ್ದರು. … : , 6, 2021 (..): “ ,” . . , -, . - , , . “ . ,” .“ . , . , . ,” ., , , , , . , . . .. , . , . , . , . .: / - /