ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಗ್ರೀನ್ ಸಿಗ್ನಲ್. ಬೆಂಗಳೂರು,ನವೆಂಬರ್,10,2021(..):ಸಿಲಿಕಾನ್‌ ಸಿಟಿ ಬೆಂಗಳೂರಿನ ಬಸವನಗುಡಿಯಲ್ಲಿ ಪ್ರತಿ ವರ್ಷ ನಡೆಯುವ ಇತಿಹಾಸ ಪ್ರಸಿದ್ಧ, ಗ್ರಾಮೀಣ ಸೊಗಡಿನ ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಗ್ರೀನ್ ಸಿಗ್ನಲ್ ನೀಡಿದೆ. ಕೊರೋನಾ ಹಿನ್ನೆಲೆ ಕಳೆದ ಎರಡು ವರ್ಷದಿಂದ ಕಡಲೆಕಾಯಿ ಪರಿಷೆ ನಡೆದಿರಲಿಲ್ಲ. ಇದೀಗ ಈ ಬಾರಿ ಕೊರೊನಾ ಸೋಂಕು ಕಡಿಮೆಯಾಗಿದ್ದು ಈ ಹಿನ್ನೆಲೆ ಕಡೆಲೆಕಾಯಿ ಪರಿಷೆ ನಡೆಸಲು ಬಿಬಿಎಂಪಿ ಅನುಮತಿ ನೀಡಿದೆ. ಕೊನೆಯ ಕಾರ್ತಿಕ ಸೋಮವಾರ ಅಂದರೆ ನವೆಂಬರ್ 29 ರಂದು ಕಡಲೆಕಾಯಿ ಪರಿಷೆಗೆ ಚಾಲನೆ ಸಿಗಲಿದ್ದು ಸುಮಾರು ಒಂದು ವಾರಗಳ ಕಾಲ ಇದು ನಡೆಯಲಿದೆ. ಪರಿಷೆಯಲ್ಲಿ ವಿವಿಧ ತಳಿಯ ಕಡಲೆಕಾಯಿಗಳು ಸಿಗಲಿದ್ದು, ಜತೆಗೆ ರಾಜ್ಯ ಹಾಗೂ ಹೊರ ರಾಜ್ಯದ ವ್ಯಾಪಾರಿಗಳು ಇಲ್ಲಿ ಬೀಡುಬಿಡುತ್ತಾರೆ. ಬೆಂಗಳೂರು ನಗರ ಸೇರಿದಂತೆ ವಿವಿಧ ಕಡೆಗಳಿಂದ ಜನರು ಬಂದು ಪರಿಷೆಯಲ್ಲಿ ಪಾಲ್ಗೊಳ್ಳುತ್ತಾರೆ. : –- – – … ‘ ’, 10, 2021 (..): () ( ) . . . 29, , . . .: / / /