ದರ್ಶನ್ ಪ್ಯಾನ್ ಇಂಡಿಯಾ ಸಿನಿಮಾ ‘ಕ್ರಾಂತಿ’ ಶೂಟಿಂಗ್ ಶುರು ಬೆಂಗಳೂರು, ಅಕ್ಟೋಬರ್ 26, 2021 (..):ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ‘ಕ್ರಾಂತಿ’ ಶೂಟಿಂಗ್ ಆರಂಭವಾಗಿದೆ. ಕ್ರಾಂತಿ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ನಾಯಕಿಯಾಗಿ ರಚಿತಾ ರಾಮ್ ಅಭಿನಯಿಸುತ್ತಿದ್ದಾರೆ. ವಿ ಹರಿಕೃಷ್ಣ ನಿರ್ದೇಶನದ ಸಿನಿಮಾ ಮುಹೂರ್ತ ಕಾರ್ಯಕ್ರಮ ಕೆಲವು ದಿನಗಳ ಹಿಂದೆ ನಡೆದಿತ್ತು. ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ಸುಮಲತಾ ಅಂಬರೀಶ್ ಕೂಡಾ ಪ್ರಮುಖ ಪಾತ್ರ ವಹಿಸಲಿದ್ದಾರೆ. ಕ್ರಾಂತಿ ಚಿತ್ರೀಕರಣ ಆರಂಭಕ್ಕೂ ಮುನ್ನ ಬೇಲೂರು ಚೆನ್ನಕೇಶವ ದೇವಾಲಯಕ್ಕೆ ತೆರಳಿದ್ದ ದರ್ಶನ್ ದೇವರ ದರ್ಶನ ಪಡೆದಿದ್ದರು.