ವಿಧಾನಪರಿಷತ್ ಮಾಜಿ ಸದಸ್ಯ ಗೋ‌. ಮಧುಸೂಧನ್ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ. ಮೈಸೂರು,ಅಕ್ಟೋಬರ್,6,2021(..):ವಿಶ್ರಾಂತ ಕುಲಪತಿ ಕೆ.ಎಸ್ ರಂಗಪ್ಪ ರವರು ನ್ಯಾಯಾಲಯದಲ್ಲಿ ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಗೋ ಮಧುಸೂಧನ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಇದರ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆ ಎಂಎಫ್ ಸಿ ನ್ಯಾಯಾಲಯ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚಿಸಿದೆ. 2020ರಲ್ಲಿ ನಡೆದ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷರಾಗಿದ್ದ ಪ್ರೋ ಕೆ.ಎಸ್ ರಂಗಪ್ಪ ಅವರು, ಗೋ. ಮಧುಸೂಧನ್ ಅವರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಸುಳ್ಳು ಆರೋಪ ಮಾಡಿ‌ ಅಪಪ್ರಚಾರ ಮಾಡಿದ್ದಾರೆಂದು ನ್ಯಾಯಾಲಯದಲ್ಲಿ ಪ್ರೊ. ಕೆ.ಎಸ್ ರಂಗಪ್ಪ ದಾವೆ ಹೂಡಿದ್ದರು. ದಾವೆ ವಿಚಾರಣೆ ನಡೆಸಿದ ಕೋರ್ಟ್ ಐಪಿಸಿ ಸೆಕ್ಷನ್ 499, 500,501, ಸೆಕ್ಷನ್ ಅಡಿ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ ನೀಡಿದೆ. ಹಾಗೆಯೇ ಸಮನ್ಸ್ ಜಾರಿಗೂ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಸಂಬಂಧ ಪ್ರೊ.ಕೆ.ಎಸ್ ರಂಗಪ್ಪ ಅವರು ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ನೀಡಿದ್ದು ವಿವರ ಹೀಗಿದೆ… ವಿಧಾನ ಪರಿಷತ್ ಮಾಜಿ ಸದಸ್ಯರಾದ ಗೋ.ಮಧುಸೂದನ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು (.55/2021) ಗೌರವಾನ್ವಿತ ನ್ಯಾಯಾಲಯವು ಆದೇಶಿಸಿದೆ. 2020ರ ಜನವರಿಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷನಾಗಿದ್ದ ವೇಳೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನಾನು ವೇದಿಕೆ ಹಂಚಿಕೊಳ್ಳದಂತೆ ಸಂಚು ರೂಪಿಸಿ ನನ್ನ ವಿರುದ್ಧ ಸುಳ್ಳು ಆರೋಪಗಳ ಮೂಲಕ ಗೋ.ಮಧುಸೂದನ್ ಅಪಪ್ರಚಾರ ಮಾಡಿದ್ದರು. ಈ ಬಗ್ಗೆ ನಾನು ನ್ಯಾಯಾಲದ ಮೊರೆ ಹೋಗಿದ್ದೆ. ಇದೀಗ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಮಾಜಿ ಸದಸ್ಯರಾದ ಗೋ.ಮಧುಸೂದನ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲು ಆದೇಶಿಸಿದೆ. ಇದು ಸತ್ಯಕ್ಕೆ ಸಂದ ಜಯವಾಗಿದೆ. : - – - - - - …. . , 6, 2021 (..): - . .. , . . . 2020, . .. , . ’ . . 499, 500, 501 . , . .. ’ (.55/2021) . . “. , 2020, . . . ,” .: / . .. / . / /