ಚಾಣಕ್ಯ ವಿವಿ ವಿಧೇಯಕ ಅಂಗೀಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ : ಸರ್ಕಾರದ ವಿರುದ್ಧ ವಾಗ್ದಾಳಿ. ಬೆಂಗಳೂರು,ಸೆಪ್ಟಂಬರ್,22,2021(..):ಚಾಣಕ್ಯ ವಿವಿ ವಿಧೇಯಕ ಅಂಗೀಕಾರಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಚಾಣಕ್ಯ ವಿವಿ ವಿಧೇಯಕವನ್ನು ನಿನ್ನೆ ಅಂಗೀಕರಿಸಿದ್ದಾರೆ. ಚರ್ಚೆಗೆ ಅವಕಾಶ ನೀಡದೆ ತರಾತುರಿಯಲ್ಲಿ ಅಂಗೀಕಾರ ಮಾಡಿದ್ದಾರೆ. ಚಾಣಕ್ಯ ವಿವಿಯನ್ನು ನಡೆಸುತ್ತಿರುವುದು ಸೆಸ್ ಸಂಸ್ಥೆ. ಸೆಸ್ ಸಂಸ್ಥೆ ನಡೆಸುತ್ತಿರುವವರು ಆರ್‌ಎಸ್‌ಎಸ್ ನವರು. ಸೆಸ್ ಸಂಸ್ಥೆಗೆ ಭೂಮಿ ನೀಡಲು 26.04.2021ರಂದು ಸಚಿವ ಸಂಪುಟದಲ್ಲಿ ಒಪ್ಪಿಗೆಯಾಗಿದೆ. ಕೆಐಎಡಿಬಿ ಸ್ವಾಧೀನಪಡಿಸಿಕೊಂಡಿದ್ದ ಭೂಮಿ ನೀಡಲಾಗಿದೆ. 1 ಕೋಟಿ 50 ಲಕ್ಷ ರೂ. ಪರಿಹಾರ ಕೊಟ್ಟು ಸ್ವಾಧೀನಪಡಿಸಿಕೊಂಡಿದ್ದರು. ಇಂತಹ ಭೂಮಿಯನ್ನು ಸೆಸ್ ಸಂಸ್ಥೆಗೆ ನೀಡಿದ್ದಾರೆ. ಸೆಸ್ ಸಂಸ್ಥೆಯಲ್ಲಿ ಯಾವುದೇ ಶಿಕ್ಷಣ ಸಂಸ್ಥೆಗಳೇ ಇಲ್ಲ. ಅಂತಹ ಸಂಸ್ಥೆಗೆ ಭೂಮಿಯನ್ನು ನೀಡಲಾಗಿದೆ ಎಂದು ಕಿಡಿಕಾರಿದರು. 50 ಕೋಟಿ ರೂಪಾಯಿಗೆ 116 ಎಕರೆ ಭೂಮಿಯನ್ನ ನೀಡಿದ್ದಾರೆ. ಸರ್ಕಾರ ರೈತರಿಗೆ 175 ಕೋಟಿ ರೂಪಾಯಿ ಪರಿಹಾರ ನೀಡಿದೆ. ರೈತರಿಂದ ಸ್ವಾಧೀನಪಡಿಸಿಕೊಂಡು ಭೂಮಿ ಅಭಿವೃದ್ಧಿಪಡಿಸಿದ್ದಾರೆ. ಈ ಭೂಮಿ 300ರಿಂದ 400 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಸರ್ಕಾರ ಈಗ ಈ ಸಂಸ್ಥೆಗೆ ಭೂಮಿಯನ್ನು ನೀಡಿದೆ. ಆರ್​ಎಸ್​ಎಸ್​ನವರಿಗೆ ಬಳುವಳಿಯಾಗಿ ಭೂಮಿಯನ್ನ ನೀಡಿದೆ. ಸೆಸ್ ಸಂಸ್ಥೆಗೆ ಸರ್ಕಾರ ಭೂಮಿ ನೀಡಿರುವುದು ದೊಡ್ಡ ಹಗರಣ ಎಂದು ಸಿದ್ದರಾಮಯ್ಯ ಹೇಳಿದರು. ಎಲ್ಲ ನಿಬಂಧನೆಗಳನ್ನು ಗಾಳಿಗೆ ತೂರಿ ಜಮೀನು ನೀಡಲಾಗಿದೆ. ಚಾಣಕ್ಯ ವಿವಿ ಮನುವಾದಿಗಳ ಯೂನಿವರ್ಸಿಟಿಯಾಗಲಿದೆ. ಈ ಆರ್​ಎಸ್​ಎಸ್​ ನವರು ಮನುವಾದಿಗಳು. ಮತ್ತೆ ಚತುರ್ವರ್ಣ ಜಾರಿ ಮಾಡುವುದಕ್ಕೆ ಹೊರಟಿದ್ದಾರೆ. ಅಂತಹ ಚಾಣಕ್ಯ ವಿವಿ ವಿಧೇಯಕವನ್ನು ಅಂಗೀಕರಿಸಿದ್ದಾರೆ. ಸ್ಪೀಕರ್ ಕೂಡ ಬಹಳ ಒಳ್ಳೆಯ ವಿವಿ ಎಂದು ಹೇಳಿದ್ದಾರೆ ಎಂದು ಕಿಡಿಕಾರಿದರು. : - – -- – . … : ., 22, 2021 (..): . , . “ ( ), . , 26.04.2021. . .1.50 , . ’ . . ,” ., 116 . 50 . “ . 175 . , . 300 .400 . . ,” .: / / / / /