ಶಿಕ್ಷಕರ ರಜೆ ಕಡಿತಗೊಳಿಸಿ ಪಠ್ಯ ಪೂರ್ಣಗೊಳಿಸುವ ಚಿಂತನೆ ಇದೆ- ಶಿಕ್ಷಣ ಸಚಿವ ಬಿ.ಸಿ ನಾಗೇಶ್. ಶಿವಮೊಗ್ಗ,ಸೆಪ್ಟಂಬರ್,11,2021(..):ಶಿಕ್ಷಕರ ರಜೆ ಕಡಿತಗೊಳಿಸಿ ಪಠ್ಯ ಪೂರ್ಣಗೊಳಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ಶಿಕ್ಷಕರ ರಜೆ ಕಡಿಮೆ ಮಾಡಿ ಸಿಲೆಬಸ್ ಪೂರ್ಣಗೊಳಿಸುವ ಕುರಿತು ಚಿಂತನೆ ಇದೆ. ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ‌ ದಿನಗಳಲ್ಲಿ ಶಿಕ್ಷಕರ ಅಭಿಪ್ರಾಯ ನೋಡಿ, ಅವಶ್ಯಕತೆ ಬಿದ್ದರೆ ನಿರ್ಣಯ ಕೈಗೊಳ್ಳುತ್ತೇವೆ ಎಂದರು. 1 ರಿಂದ 5 ನೇ ತರಗತಿಯವರೆಗೆ ಶಾಲೆ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ತಾಂತ್ರಿಕ ಸಭೆ ಸದ್ಯದಲ್ಲಿಯೇ ಮಾಡುತ್ತಿದ್ದೇವೆ. ಸದ್ಯದಲ್ಲೇ 1 ರಿಂದ 5 ರವರೆಗೆ ಶಾಲೆ ತೆರೆಯುವ ಬಗ್ಗೆ ತಾಂತ್ರಿಕ ಸಮಿತಿ ಮುಂದೆ ಚರ್ಚೆ ಮಾಡಿ, ಸಮಿತಿ ಅನುಮತಿ ನೀಡಿದರೇ 1ರಿಂದ 5ನೇ ತರಗತಿ ಆರಂಭ ಮಾಡುತ್ತೇವೆ ಎಂದು ನುಡಿದರು. …. ’: .. , 11, 2021 (..): .. . , . , . 1st 5th . 1st 5th .: / / / / / .. : – - –- -