ಮುಂದಿನ ದಿನಗಳಲ್ಲಿ ಬಸವರಾಜ್ ಬೊಮ್ಮಾಯಿ ಮತ್ತೆ ಸಿಎಂ ಆಗಲಿದ್ದಾರೆ- ಕೇಂದ್ರ ಗೃಹ ಸಚಿವ ಅಮಿತ್ ಶಾ ನುಡಿ. ದಾವಣಗೆರೆ,ಸೆಪ್ಟಂಬರ್,2,2021(..):ಮುಂದಿನ ದಿನಗಳಲ್ಲಿ ಬಸವರಾಜ್ ಬೊಮ್ಮಾಯಿ ಮತ್ತೆ ಸಿಎಂ ಆಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನುಡಿದಿದ್ದಾರೆ. ದಾವಣಗೆರೆಯಲ್ಲಿ ಇಂದು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯಡಿಯೂರಪ್ಪನವರು ಸ್ವಯಂಪ್ರೇರಿತವಾಗಿ ಬೇರೆಯವರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿಯೇ ಬಸವರಾಜ್ ಬೊಮ್ಮಾಯಿಯವರನ್ನ ಸಿಎಂ ಮಾಡಲಾಗಿದೆ. ಮುಂದಿನ ಬಾರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮತ್ತೆ ಸರ್ಕಾರ ರಚನೆ ಮಾಡಲಿದ್ದೇವೆ. ಬರುವ ದಿನಗಳಲ್ಲಿ ಬಸವರಾಜ್ ಬೊಮ್ಮಾಯಿಯವರು ಮತ್ತೆ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ. : - - - – -