ವಿದ್ಯುತ್ ನಿಗಮಗಳ ಖಾಸಗೀಕರಣ ವಿಚಾರ ಮತ್ತು ಅದ್ಧೂರಿ ಗಣೇಶೋತ್ಸವ ಆಚರಣೆ ಬಗ್ಗೆ ಇಂಧನ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ. ಮೈಸೂರು,ಆಗಸ್ಟ್,25,2021(..):ವಿದ್ಯುತ್ ನಿಗಮಗಳ ಖಾಸಗೀಕರಣ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ಚೆಸ್ಕಾಂ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಹಾಗೂ ಚೆಸ್ಕಾಂ ಅಧಿಕಾರಿಗಳು ಭಾಗಿಯಾಗಿದ್ದರು. ಸಭೆ ಬಳಿಕ ಮಾತನಾಡಿದ ಸಚಿವ ಸುನೀಲ್ ಕುಮಾರ್, ವಿದ್ಯುತ್ ನಿಗಮ ಗಳ ಖಾಸಗೀಕರಣ ವಿಚಾರ ಸರ್ಕಾರದ ಮುಂದೆ ಇಲ್ಲ. ಕೇಂದ್ರದ ಬಿಲ್ ಬಗ್ಗೆ ನನಗೆ ಮಾಹಿತಿ ಇಲ್ಲ. ವಿದ್ಯುತ್ ದರ ಏರಿಕೆ ಕೂಡ ಸರ್ಕಾರದ ಕೈಯಲ್ಲಿ ಇಲ್ಲ. ಇದು ವಿದ್ಯುತ್ ಸರಬರಾಜು ಮಾಡುವವರ ತೀರ್ಮಾನ. ಇದರ ಬಗ್ಗೆ ಸರ್ಕಾರ ಏನು ತೀರ್ಮಾನ ತೆಗೆದುಕೊಳ್ಳುವುದಿಲ್ಲ. ವಿದ್ಯುತ್ ಕಂಪನಿಗಳ ಖಾಸಗೀಕರಣ ಇಲ್ಲ ಎಂದರು. ಅದ್ದೂರಿಯಾಗಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಸುನೀಲ್ ಕುಮಾರ್, ನಾನು ಸರ್ಕಾರದ ಸಚಿವನಾಗಿದ್ದೇನೆ. ನಮ್ಮ ಸರ್ಕಾರದ ಜವಾಬ್ದಾರಿ ಇರುವುದು ಕೊರೊನಾ ನಿಯಂತ್ರಣ ಮಾಡುವುದು. ಕಾನೂನು ಮಾಡುವುದು ದೊಡ್ಡದಲ್ಲ ಜನ ಸಹಕಾರ ಕೊಡಬೇಕು. ಜನ ಸಹಕಾರ ಕೊಟ್ಟರೆ ಕೊರೊನಾ ನಿಯಂತ್ರಣ ಮಾಡಬಹುದು. ಹಾಗಂತ ಗಣೇಶೋತ್ಸವ ಅದ್ದೂರಿಯಾಗಿ ನಡೆಯಬಾರದ..? ಎಂದಲ್ಲ. ವೈಭವಿಕಾರಣ ಎಲ್ಲ ಇರಬೇಕು. ಆದ್ರೆ ಯಾವ ಎಚ್ಚರಿಕೆ ತೆಗೆದುಕೊಳ್ಳಬೇಕು ಅದನ್ನು ಸಂಘ ಸಂಸ್ಥೆಗಳು ಧಾರ್ಮಿಕ‌ ಮುಖಂಡರು ಮಾಡಬೇಕು. ಕೊರೊನಾ ಏರಿಕೆಯ ಶೇಕಡವಾರು ಗಮನದಲ್ಲಿ ಇಟ್ಟುಕೊಂಡು ನಿಯಮ ಸಡಿಲಿಕೆ‌ ಮಾಡುವ ಬಗ್ಗೆ ಸರ್ಕಾರ ಚಿಂತನೆ ಮಾಡುತ್ತದೆ ಎಂದು ತಿಳಿಸಿದರು. ರಾಹುಲ್ ಗಾಂಧಿ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೀಳುಮಟ್ಟದ ಪದ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಸುನೀಲ್ ಕುಮಾರ್, ಯಾರು ಟೀಕೆ ಮಾಡುವ ವಿಚಾರದಲ್ಲಿ ಎಲ್ಲೆ ಮೀರಬಾರದು. ನಾನು ಈ ವಿಚಾರದಲ್ಲಿ ಎಚ್ಚರಿಕೆಯಿಂದ ಇದ್ದೇನೆ. ಈ ವಿಚಾರವನ್ನು ಅವರ ಬಳಿಯೆ ಕೇಳಬೇಕು ಎಂದರು. … ’ .: , 25, 2021 (..): ’ . . . ’ . “ ’ ’ . ’ . . , ,” . , ’ -19 . “ , . . ’ . . . ,” .: / / / ’/ : - – –