ವಿಧಾನಪರಿಷತ್ ಚುನಾವಣೆ: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಮತದಾನ. ಬೆಂಗಳೂರು, ಜೂನ್, 3,2024 (..) :ಈಗಾಗಲೇ ಲೋಕಸಭೆ ಚುನಾವಣೆ ಮುಕ್ತಾಯವಾಗಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಇಂದು ವಿಧಾನ ಪರಿಷತ್​​ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರದ ಮತದಾನ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 4ರವರೆಗೆ ಮತದಾನ ನಡೆಯಲಿದೆ. ಕಾಂಗ್ರೆಸ್ 6 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಿದೆ. ಆದರೆ, ಬಿಜೆಪಿ 4, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮೈತ್ರಿಯಾಗಿ ಅಖಾಡಕ್ಕಿಳಿದಿವೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​​​ನಿಂದ ಮರಿತಿಬ್ಬೇಗೌಡ ಹಾಗೂ ಜೆಡಿಎಸ್ ನಿಂದ ವಿವೇಕಾನಂದ ಸ್ಪರ್ಧಿಸಿದರೇ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​​​ನಿಂದ ಡಿಟಿ ಶ್ರೀನಿವಾಸ್ ಹಾಗೂ ಬಿಜೆಪಿಯಿಂದ ವೈಎ ನಾರಾಯಣಸ್ವಾಮಿ ಸ್ಪರ್ಧಿಸಿದ್ದಾರೆ. ಇನ್ನು ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​​​ನಿಂದ ಕೆಕೆ ಮಂಜುನಾಥ್ ಹಾಗೂ ಜೆಡಿಎಸ್​ನಿಂದ ಎಸ್‌ಎಲ್ ಭೋಜೇಗೌಡ ಕಣಕ್ಕಿಳಿದಿದ್ದಾರೆ. ಹಾಗೆಯೇ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಡಾ. ಚಂದ್ರಶೇಖರ ಪಾಟೀಲ ಹಾಗೂ ಬಿಜೆಪಿಯಿಂದ ಅಮರನಾಥ ಪಾಟೀಲ್ ಕಣದಲ್ಲಿದ್ದರೇ ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಆಯನೂರು ಮಂಜುನಾಥ್ ಹಾಗೂ ಬಿಜೆಪಿಯಿಂದ ಧನಂಜಯ ಸರ್ಜಿ ಸ್ಪರ್ಧಿಸಿದ್ದಾರೆ. ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮೋಜಿಗೌಡ ಹಾಗೂ ಭಾರತೀಯ ಜನತಾ ಪಕ್ಷದಿಂದ ಅ.ದೇವೇಗೌಡ ಕಣದಲ್ಲಿದ್ದಾರೆ. : , , , ,