ನಮ್ಮಲ್ಲಿ ವಾದ ವಿವಾದ ಮುಗಿದಿದೆ: ತೀರ್ಪು ನಿರೀಕ್ಷೆಯಲ್ಲಿದ್ದೇವೆ- ಸಚಿವ ಸಿ.ಪಿ ಯೋಗೇಶ್ವರ್. ಕಲ್ಬುರ್ಗಿ,ಜೂನ್,29,2021(..):ನಮ್ಮಲ್ಲಿ ವಾದ ವಿವಾದ ಮುಗಿದಿವೆ. ತೀರ್ಪು ನಿರೀಕ್ಷೆಯಲ್ಲಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ. ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸಿ.ಪಿ ಯೋಗೇಶ್ವರ್, ಕೊರೋನಾ ಮಾರ್ಗಸೂಚಿ ಬಿಡುಗಡೆ ಮಾಡಿದಂತೆ ನಮ್ಮ ವರಿಷ್ಠರು ಮಾರ್ಗಸೂಚಿ ನೀಡುವ ಆಶಾಭಾವನೆ ಇದೆ. ನನ್ನ ಭಾವನೆಗಳನ್ನೆಲ್ಲಾ ಹೈಕಮಾಂಡ್ ಮುಂದಿಟ್ಟಿದ್ದೇನೆ. ಏನು ತೀರ್ಮಾನ ಆಗುತ್ತೆ ಕಾದು ನೋಡೋಣ ಎಂದು ಹೇಳಿದರು. ಸಿದ್ಧರಾಮಯ್ಯ ಡಿಕೆಶಿಗೆ ಸಿಎಂ ಆಗುವ ಅವಕಾಶ ಸಿಗಲ್ಲ. ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿಗೆ ಪೈಪೋಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಸಿ.ಪಿ ಯೋಗೇಶ್ವರ್, ಸಿದ್ಧರಾಮಯ್ಯ ಡಿ.ಕೆ ಶಿವಕುಮಾರ್ ಗೆ ಸಿಎಂ ಆಗುವ ಅವಕಾಶ ಸಿಗುವುದಿಲ್ಲ. ಪಾಪ ಡಿ.ಕೆ ಶಿವಕುಮಾರ್ ಬಹಳಷ್ಟು ಕನಸು ಕಾಣುತ್ತಿದ್ದಾರೆ. ಡಿಕೆಶಿಗೆ ಶಾಸಕರ ಬೆಂಬಲ ಇದ್ದಂತೆ ಕಾಣುತ್ತಿಲ್ಲ. ದಲಿತ ಸಿಎಂ ಆಗಬೇಕೆಂದು ಪ್ರಯತ್ನ ಆಗುತ್ತಿದೆ. 70 ವರ್ಷಗಳ ಕಾಲ ದಲಿತ ಸಮುದಾಯ ಕಾಂಗ್ರೆಸ್ ಪರ ಇತ್ತು. ಅವರಿಗೆ ಅನ್ಯಾಯವಾಗಿದೆ ಎಂಬ ಧ್ವನಿ ಪ್ರಾರಂಭವಾಗಿದೆ. ಎರಡು ವರ್ಷ ಏನಾಗುತ್ತೆ ಕಾದು ನೋಡೋಣ ಎಂದು ಹೇಳಿದರು. …. ; : .. , 29, 2021 (..): “ . ,” .. . , , . “ .” , .. . “.. . , ’ . , . . . , ,” .: / .. / / : - - - –-