ತಕ್ಷಣ ವಿಶೇಷ ಅಧಿವೇಶನ ಕರೆಯುವಂತೆ ಸಿಎಂ, ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ಮಾಜಿ ಸಿಎಂ ಹೆಚ್.ಡಿಕೆಯಿಂದ ಪತ್ರ. ಬೆಂಗಳೂರು,ಜೂನ್,25,2021(..):ಹಲವು ವಿಚಾರಗಳ ಬಗ್ಗೆ ಚರ್ಚಿಸಲು ತಕ್ಷಣವೇ ವಿಶೇಷ ಅಧಿವೇಶನ ಕರೆಯಿರಿ ಎಂದು ಸಿಎಂ, ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ, ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ, ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮುಂತಾದ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಿರಿ ಎಂದು ಸಿಎಂ, ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ. : - - - – .