ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗ ರೈತ ಮುಖಂಡರಿಂದ ಪ್ರತಿಭಟನೆ. ಮೈಸೂರು,ಜೂನ್,5,2021(..):ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರು –ಕೊಡಗು ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗ ರೈತಮುಖಂಡರು ಪ್ರತಿಭಟನೆ ನಡೆಸಿದರು. ರಾಜ್ಯ ರೈತ ಸಂಘಟನೆ ವತಿಯಿಂದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಕೆಂದ್ರ ಕೃಷಿ ಮಸೂದೆಯ ಪ್ರತಿ ಸುಟ್ಟು ಹಾಕಿ ರೈತಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. : – - – –-