ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ಸಿಎಂ ಬಿಎಸ್ ಯಡಿಯೂರಪ್ಪ… ಬೆಂಗಳೂರು, ಮೇ 17,2021(..):ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿ.ಜಿ.ಎಸ್. ಗ್ಲೋಬಲ್ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಂಡ್ ಹಾಸ್ಪಿಟಲ್ ವತಿಯಿಂದ ಬಿ.ಜಿ.ಎಸ್. ಮೆಡಿಕಲ್ ಕಾಲೇಜ್, ಉತ್ತರಹಳ್ಳಿ ಮುಖ್ಯರಸ್ತೆ, ಕೆಂಗೇರಿ ಇಲ್ಲಿ ಆಯೋಜಿಸಿರುವ 210 ಆಮ್ಲಜನಕ ಸೌಲಭ್ಯವುಳ್ಳ ಹಾಸಿಗೆಗಳು, 43 ಐಸಿಯು ಹಾಸಿಗೆಗಳು, 30 ಹಾಸಿಗೆಗಳು ಹಾಗೂ 100 ಸಾಮಾನ್ಯ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದರು. ಹಾಗೂ ಮೈಸೂರಿನ ಹಸಿರು ಪ್ರತಿಷ್ಠಾನದ ವತಿಯಿಂದ ಎರಡು ಸಾವಿರ ಸಸಿಗಳನ್ನು ಶ್ರೀ ಮಠಕ್ಕೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಆದಿಚುಂಚನಗಿರಿ ಮಹಾಸಂಸ್ಥಾನ ದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ, ಸಹಕಾರ ಸಚಿವ ಎಸ್ ಟಿ. ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು. : - - -