ಇಂದಿನಿಂದ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ… ಮೈಸೂರು,ಏಪ್ರಿಲ್,21,2021(..):ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಪ್ರಕರಣಗಳನ್ನ ತಡೆಗಟ್ಟಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ಮಧ್ಯೆ ಇಂದಿನಿಂದ ಮೇ 4ರವರೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ದಿನಾಂಕ 21-4-2021ರ ರಾತ್ರಿ 9ರಿಂದ 4-5-2021ರ ಬೆಳಿಗ್ಗೆ 6 ಗಂಟೆವರೆಗೆ ಚಾಮುಂಡಿ ಬೆಟ್ಟದ ದೇವಾಲಯಕ್ಕ ಸಾರ್ವಜನಿಕರ ಪ್ರವೇಶವನ್ನ ನಿರ್ಬಂಧಿಸಲಾಗಿದೆ. ರಾಜ್ಯದಲ್ಲಿ ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರ್ಕಾರದ ಆದೇಶದನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಜನರು ಸಹಕರಿಸುವಂತೆ ಚಾಮುಂಡಿಬೆಟ್ಟದ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ. ಇಂದಿನಿಂದ ರಾಜ್ಯಾದ್ಯಂತ ಮೇ 4ರವರೆಗೆ ನೈಟ್ ಕರ್ಫ್ಯೂ, ವಿಕೇಂಡ್ ಕರ್ಫ್ಯೂ ಜಾರಿಗೆ ಬರಲಿದೆ. : - - –-