ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ : ರಾಜ್ಯ ಕಾಂಗ್ರೆಸ್ ಟ್ವೀಟ್ ಬೆಂಗಳೂರು,ಏಪ್ರಿಲ್,18,2021(..): ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ. ದಿನೇ ದಿನೇ ಸೋಂಕಿತರ, ಸಾವುಗಳ ಸಂಖ್ಯೆ ಹೆಚ್ಚುತ್ತಿದೆ, ಈ ಸಮಯದಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಆಟವಾಡುವುದು ಸರಿಯಲ್ಲ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ. ಸಿಎಂ ಬಿ.ಎಸ್.ವೈ ಹಾಗೂ ಡಿಸಿಎಂ ಅಶ್ವಥ್ ನಾರಾಯಣ್ ಅವರು ಕೂಡಲೇ ನಾಳೆಯಿಂದ ಶುರುವಾಗುವ ಪರೀಕ್ಷೆಗಳನ್ನು ಮುಂದೂಡುವ ಕ್ರಮ ಕೈಗೊಳ್ಳಿ. ಯುವಜನರನ್ನು ಅನಗತ್ಯವಾಗಿ ಅಪಾಯಕ್ಕೆ ತಳ್ಳಬೇಡಿ ಎಂದು ಒತ್ತಾಯಿಸಿದೆ. : ----- -