ಜ್ಞಾನಬುತ್ತಿ ಸಂಸ್ಥೆಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನೋತ್ಸವ ಆಚರಣೆ ಮೈಸೂರು,ಏಪ್ರಿಲ್,15,2021(..) :ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ತರಬೇತಿ ಶಿಬಿರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನೋತ್ಸವ ಪ್ರಯುಕ್ತ ಸಂವಿಧಾನ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು. ಮೈಸೂರು ವಿವಿ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕ ಪ್ರೊ.ಜೆ.ಸೋಮಶೇಖರ್, ಸಂವಿಧಾನ ತಜ್ಞ ಎಂ.ಡಿ.ಹರೀಶ್ ಕುಮಾರ್ ಹೆಗಡೆ, ವಿದ್ಯಾವರ್ಧಕ ಕಾನೂನು ಕಾಲೇಜಿನ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕ ಪ್ರೊ.ಕೆ.ಬಿ.ವಾಸುದೇವ,ಜ್ಞಾನಬುತ್ತಿ ಕಾರ್ಯದರ್ಶಿ ಎಚ್.ಬಾಲಕೃಷ್ಣ, ಡಾ.ಎಸ್.ಬಿ.ಎಂ.ಪ್ರಸನ್ನ, ವಿಭಾವಸು, ಜೈನಹಳ್ಳಿ ಸತ್ಯನಾರಾಯಣಗೌಡ ಇತರರು ಭಾಗವಹಿಸಿದ್ದರು. : --...--