ದೇಶದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡಲ್ಲ-ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್… ನವದೆಹಲಿ,ಏಪ್ರಿಲ್,14,2021(..):ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಳಳವಾಗಿದ್ದರೂ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡಲ್ಲ. ಆರ್ಥಿಕ ಚಟುವಟಿಕೆ ನಿಲ್ಲಿಸಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಈ ಕುರಿತು ಇಂದು ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ಲಾಕ್ ಡೌನ್ ಮಾಡುವ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದೆ ಇಲ್ಲ. ಸರ್ಕಾರಕ್ಕೆ ಮತ್ತೆ ಲಾಕ್ಡೌನ್ ಮಾಡುವ ಚಿಂತನೆಯಿಲ್ಲ. ಆದರೆ ಸೋಂಕು ಪ್ರಕರಣಗಳು ಹೆಚ್ಚಿರುವ ಕಡೆಯಲ್ಲಿ ಸ್ಥಳೀಯವಾಗಿ ಕಂಟೈನ್ಮೆಂಟ್ ವಲಯ ನಿರ್ಮಾಣ ಮಾಡಿ ನಿಯಂತ್ರಣಕ್ಕೆ ಪರಿಹಾರ ಕಂಡುಕೊಳ್ಳಬಹುದು ಅಷ್ಟೆ ಎಂದು ಸ್ಪಷ್ಟನೆ ನೀಡಿದರು. ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸ್ಥಳೀಯವಾಗಿ ಕೊರೊನಾ ಕಂಟ್ರೋಲ್ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ದೇಶದಲ್ಲಿ ಯಾವುದೇ ಕಾರಣಕ್ಕೂ ಆರ್ಥಿಕ ಚಟುವಟಿಕೆ ನಿಲ್ಲಿಸುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. : - – – - - .