ಲಾಕ್ಡೌನ್ ಜಾರಿ ಸಂಬಂಧ ತಪ್ಪುಗಳನ್ನು ಹೇಳಬೇಡಿ : ಸಚಿವ ಸುಧಾಕರ್ ಗೆ ಸಿಎಂ ಬಿ.ಎಸ್.ವೈ ಸಲಹೆ ಬೆಂಗಳೂರು,ಏಪ್ರಿಲ್,13,2021(..) :ಲಾಕ್ಡೌನ್ ಜಾರಿ ಮಾಡಲು ಸಲಹಾ ಸಮಿತಿ ಸೂಚನೆ ನೀಡಿಲ್ಲ. ಸಮಿತಿಯಲ್ಲಿ ನಾನು ಇದ್ದೇನೆ. ಸರ್ವಪಕ್ಷ ಸಭೆಯಲ್ಲಿ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ತಪ್ಪುಗಳನ್ನು ಹೇಳಬೇಡಿ ಎಂದು ಸಚಿವ ಸುಧಾಕರ್ ಗೆ ಸಿಎಂ ಬಿ.ಎಸ್.ವೈ ಹೇಳಿದ್ದಾರೆ.ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ. ಸರ್ವಪಕ್ಷ ಸಭೆಯಲ್ಲಿ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಮುಂದೆ ಏನೇನು ಮಾಡಬೇಕೆಂದು ತೀರ್ಮಾನ ಮಾಡಲಾಗುವುದು. ಕೊರೋನಾ ತಡೆಯಲು ಜನತೆ ಸಹಕಾರ ನೀಡಬೇಕು. ಜನ ಇದನ್ನು ಮರೆತರೆ ಅನಾಹುತ ಆಗಲಿದೆ ಎಂದು ಹೇಳಿದ್ದಾರೆ. ಸಭೆಗೆ ಕರೆಯುತ್ತೇವೆ ಬರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಸರ್ವಪಕ್ಷ ಸಭೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬರುವುದಿಲ್ಲ ಎಂಬ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ ಅವರು, ಸಭೆಗೆ ಕರೆಯುತ್ತೇವೆ ಬರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರವಾಗಿದೆ. ಸಭೆ ಕರೆಯಿರಿ ಎಂದು ಅವರು ಹೇಳಿದ್ದರು. ಈಗ ಬರುವುದಿಲ್ಲ ಅಂತಿದಾರೆ ಎಂದು ಬೇಸರವ್ಯಕ್ತಪಡಿಸಿದರು. : ----’ - ..---