“ಅತಿಯಾದ ಸಾಲದಿಂದ ನೌಕರ ಆತ್ಮಹತ್ಯೆ, ಯಾರ ಕಿರುಕುಳದಿಂದಲೂ ಅಲ್ಲ” : ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟನೆ ಬೆಂಗಳೂರು,ಏಪ್ರಿಲ್,09,2021(..) :ಅತಿಯಾದ ಸಾಲದಿಂದ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಹೊರತು ಯಾರ ಕಿರುಕುಳದಿಂದಲೂ ಅಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಮುಷ್ಕರ ನಿರತ ಸಾರಿಗೆ ನೌಕರ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳ ಕಿರುಕುಳಕ್ಕೆ ಆತ್ಮಹತ್ಯೆ ಎಂದು ಸಾರಿಗೆ ಸಂಘಟನೆಗಳು ಇಲಾಖೆ ಮೇಲೆ ಕೆಟ್ಟ ಹೆಸರು ಬರುವಂತೆ ಆರೋಪಿಸುತ್ತಿದ್ದಾರೆ ಎಂದು ದೂರಿದರು. ಇನ್ನು ಇಂದಿನಿಂದ ಸಾವಿರಕ್ಕೂ ಹೆಚ್ಚು ಸರ್ಕಾರಿ ಬಸ್ ಗಳು ಸಂಚರಿಸುತ್ತಿವೆ. ನಮ್ಮ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಲು ಸಿದ್ಧರಿದ್ದಾರೆ. ತಮಗೆ ಸಂಬಳ ಹೆಚ್ಚಿಸಿದರೆ ಸಾಕು ಎಂದು ಹೇಳುತ್ತಿದ್ದಾರೆ. ಆದರೆ, ಮುಷ್ಕರ ನಿರತರು ನಮ್ಮ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಹಾಜರಾಗದಂತೆ ತಡೆಯುತ್ತಿದ್ದಾರೆ ಎಂದು ಕಿಡಿಕಾರಿದರು. : ---------