“ಸಿಡಿ ಸರ್ಕಾರ ಸಾರಿಗೆ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲಿ ಸೋತಿದೆ” : ರಾಜ್ಯ ಕಾಂಗ್ರೆಸ್ ಕಿಡಿ ಬೆಂಗಳೂರು,ಏಪ್ರಿಲ್,07,2021(..): ಈ ಸಿಡಿ ಸರ್ಕಾರ ಇಷ್ಟು ದಿನಗಳಲ್ಲಿ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲಿ ಸೋತಿದೆ. ಬಿಜೆಪಿ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಇಂದು ಮತ್ತೆ ಸಾರ್ವಜನಿಕರು ಪರದಾಡಬೇಕಾಗಿದೆ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಕೆ ಎಸ್ ಆರ್ ಟಿ ಸಿ ಸಾರಿಗೆ ನೌಕರರ ಪ್ರತಿಭಟನೆ ಕುರಿತು ಟ್ವೀಟ್ ಮಾಡಿದ್ದು, ಕಳೆದ ಡಿಸೆಂಬರ್‌ನಿಂದಲೇ ಸಾರಿಗೆ ನೌಕರರು ತಮ್ಮ ಬೇಡಿಕೆಗಳಿಗಾಗಿ ಆಗ್ರಹಿಸುತ್ತಾ ಬಂದಿದ್ದರೂ, ಬೇಜವಾಬ್ದಾರಿ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಇಂದು ಮತ್ತೆ ಸಾರ್ವಜನಿಕರು ಪರದಾಡಬೇಕಾಗಿದೆ ಎಂದು ಅಸಮಾಧಾನವ್ಯಕ್ತಪಡಿಸಿದೆ. : --------