ಡಿಜಿ &ಐಜಿಪಿ ಭೇಟಿಯಾಗಿ ಮನವಿ ಸಲ್ಲಿಸಿದ ಬಿಜೆಪಿ ನಿಯೋಗ. ಬೆಂಗಳೂರು, ಮೇ 18,2024 (..): ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಮತ್ತು ಕಾನೂನು ಸುವ್ಯವಸ್ಥೆ ಕುಸಿದಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿದೆ. ಮಾಜಿ ಸಿಎಂ ಡಿವಿ ಸದಾನಂದ ಗೌಡ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. ಶಾಸಕ ಸಿಕೆ ರಾಮಮೂರ್ತಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ ನಾರಾಯಣ್ ನಿಯೋಗದಲ್ಲಿದ್ದರು. ರಾಜ್ಯದಲ್ಲಿ ಕಾನೂನು‌ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಡಿಜಿಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗಿದೆ. : , , ,