ಬಾಬು ಜಗಜೀವನ್ ರಾಮ್ ಬದುಕು, ಸಾಧನೆ ನಮ್ಮೆಲ್ಲರಿಗೂ ಮಾರ್ಗದರ್ಶನ : ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರು,ಏಪ್ರಿಲ್,05,2021(..) :ಆಧುನಿಕ ಭಾರತದ ನಿರ್ಮಾಣ ಮತ್ತು ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರನ್ನು ಅವರ ಜನ್ಮದಿನದಂದು ಗೌರವ ಮತ್ತು ಕೃತಜ್ಞತೆಯಿಂದ ಸ್ಮರಿಸುತ್ತೇನೆ. ಅವರ ಬದುಕು ಮತ್ತು ಸಾಧನೆ ನಮ್ಮೆಲ್ಲರಿಗೂ ಸದಾ ಮಾರ್ಗದರ್ಶನ ಮಾಡುತ್ತಿರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಟ್ವೀಟ್ ಮೂಲಕ ಗೌರವ ಸಲ್ಲಿಸಿದ ಅವರು, ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ದಿವಂಗತ ಬಾಬು ಜಗಜೀವನರಾಮ್ ಅವರ ಜನ್ಮ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದೆ ಎಂದು ಹೇಳಿದ್ದಾರೆ. ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಇತರರು ಇದ್ದರು. : ----- -