ಕೆ.ಎಸ್.ಈಶ್ವರಪ್ಪ ಮತ್ತು ಯತ್ನಾಳ್ ಗೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನೀಡಿದ ಸಲಹೆ ಏನು ಗೊತ್ತೆ? ಮೈಸೂರು,ಏಪ್ರಿಲ್,03,2021(..) :ರಾಜ್ಯ, ಪಕ್ಷ, ನಾಯಕತ್ವದ ಹಿತದೃಷ್ಟಿಯಿಂದ ಸಣ್ಣ,ಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು ಹೋಗಿ ಎಂದು ಸಲಹೆ ನೀಡುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು ಹೋಗುವಂತೆ ಸಲಹೆ ನೀಡುತ್ತೇನೆ ಎಂದರು. ಆರೋಗ್ಯದ ದೃಷ್ಟಿಯಿಂದ ನನ್ನ ಜವಾಬ್ದಾರಿಯನ್ನು ಮಾತ್ರವೇ ನಿರ್ವಹಿಸುತ್ತಿದ್ದೇನೆ. ಯಡಿಯೂರಪ್ಪ ಅವರು ಸಭೆ ಕರೆದು ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವ ಕಾರ್ಯ ಮಾಡಬೇಕು. ಮಾಡುತ್ತಾರೆ ಎಂದು ತಿಳಿಸಿದರು. : ..---. --