“ಡಿಕೆಶಿ ಹೆಸರು ಬರುತ್ತಲೇ ವರಸೆ ಬದಲಾಯಿಸಿಬಿಟ್ಟಿರಿ” : ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಬೆಂಗಳೂರು,ಮಾರ್ಚ್,29,2021(..) :ಸೆಕ್ಷನ್‌ ಸ್ಪೆಷಲಿಸ್ಟ್ ಸಿದ್ದರಾಮಯ್ಯ ನಿಮಗೆ ಈಗ ಜ್ಞಾನೋದಯವಾಗಿದೇ? ಸದನದಲ್ಲಿ ಬಜೆಟ್‌ ಮೇಲಿನ ಚರ್ಚೆಯ ಸಮಯವನ್ನು ಅಪ್ರಸ್ತುತವಾದ ವಿಚಾರಕ್ಕೆ ಬಳಸಿಕೊಂಡು ಸದನದ ಅಮೂಲ್ಯ ಸಮಯ ವ್ಯರ್ಥ ಮಾಡುವಾಗ ಇದೆಲ್ಲಾ ನೆನಪಿರಲಿಲ್ಲವೇ? ಡಿಕೆಶಿ ಹೆಸರು ಬರುತ್ತಲೇ ವರಸೆ ಬದಲಾಯಿಸಿಬಿಟ್ಟಿರಿ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಆಕ್ರೋಶವ್ಯಕ್ತಪಡಿಸಿದೆ.ಸೆಕ್ಷನ್‌ ಸ್ಪೆಷಲಿಸ್ಟ್‌ ಸಿದ್ದರಾಮಯ್ಯ, ಸಂತ್ರಸ್ಥ ಯುವತಿಯ ಪೋಷಕರು ನೇರವಾಗಿ ನಿಮ್ಮ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮೇಲೆ ಬೊಟ್ಟು ಮಾಡಿ, ಸಂತ್ರಸ್ಥೆಯನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.ಹೀಗಿರುವಾಗ ಯುವತಿಗೆ ಅಪಾಯ ಎದುರಾದರೆ ಕಾನೂನಿನ ಪ್ರಕಾರ ಡಿಕೆಶಿ ಅವರು ಹೊಣೆ ಅಲ್ಲವೇ? ಎಂದು ಪ್ರಶ್ನಿಸಿದೆ. : ------- -