ರಮೇಶ್ ಜಾರಕಿಹೊಳಿ ವಿರುದ್ದ ಡಿಕೆಶಿ ಅಭಿಮಾನಿಗಳಿಂದ ಪ್ರತಿಭಟನೆ ಮೈಸೂರು,ಮಾರ್ಚ್,28,2021(..): ರಮೇಶ್ ಜಾರಕಿಹೋಳಿ ವಿರುದ್ದ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು. ಹೆಬ್ಬಾಳದ ಸೂರ್ಯ ಬೇಕರಿ ವೃತ್ತದಲ್ಲಿ ಜಮಾವಣೆಗೊಂಡ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಹೇಳಿಕೆ ಖಂಡಿಸಿ ಆಕ್ರೋಶವ್ಯಕ್ತಪಡಿಸಿದರು. ಡಿಕೆಶಿ ಅಭಿಮಾನಿಗಳ ಸಂಘದ ಅಧ್ಯಕ್ಷ ರವಿಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಾರಕಿಹೊಳಿ ಹಾಗೂ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಹರೀಶ್ ಗೌಡ, ರವಿಕುಮಾರ್ ಇತರರು ಭಾಗವಹಿಸಿದ್ದರು. : - ---