ಸಚಿವ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ…. ಮೈಸೂರು,ಮಾರ್ಚ್,27,2021(..):ಏಕಪತ್ನಿವ್ರತಸ್ಥ ಎಂಬ ಹೇಳಿಕೆ ನೀಡಿ ಸಾಕಷ್ಟು ಸುದ್ಧಿಯಾಗಿದ್ದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ಸಚಿವ ಸುಧಾಕರ್ ಹೇಳಿಕೆ ಖಂಡಿಸಿ ಕಾಂಗ್ರೆಸ್ ಭವನದ ಮುಂಭಾಗ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಸರ್ಕಾರ ಮಹಿಳೆಯರ ಮೇಲೆ ದೌರ್ಜನ್ಯ ಮಾಡುತ್ತಿದೆ. ಮಹಿಳೆಯರನ್ನು ಈ ಸರ್ಕಾರ ಕೇವಲವಾಗಿ ನೋಡುತ್ತಿದೆ. 225 ಶಾಸಕರನ್ನು ಸುಧಾಕರ್ ಅವಮಾನ ಮಾಡಿದ್ದಾರೆ. ಕೂಡಲೇ ಸರ್ಕಾರ ಸುಧಾಕರ್ ರಾಜೀನಾಮೆ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. : –- –- - -