“ಸಿಡಿ ಪ್ರಕರಣ ಬಗ್ಗೆ ಮಾತನಾಡುವುದಕ್ಕೆ ಕಾಂಗ್ರೆಸ್ ನವರಿಗೆ ನೈತಿಕತೆಯಿಲ್ಲ” : ಶಾಸಕ ರೇಣುಕಾಚಾರ್ಯ ಬೆಂಗಳೂರು,ಮಾರ್ಚ್,24,2021(..): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬಗ್ಗೆ ಮಾತನಾಡುವುದಕ್ಕೆ ಕಾಂಗ್ರೆಸ್ ನವರಿಗೆ ನೈತಿಕತೆಯಿಲ್ಲ ಎಂದು ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರು ಎಚ್.ವೈ.ಮೇಟಿ ಅವರಿಗೆ ಕ್ಲೀನ್ ಚಿಟ್ ಕೊಟ್ಟಿಲ್ವ? ನೈತಿಕಹೊಣೆ ಹೊತ್ತು ರಮೇಶ್ ರಾಜೀನಾಮೆ ನೀಡಿದ್ದಾರೆ. ಸಿಡಿಯಲ್ಲಿರುವ ಯುವತಿ ನೇರವಾಗಿ ಬಂದು ದೂರು ನೀಡಿಲ್ಲ. ಸದನದಲ್ಲಿ ಚರ್ಚಿಸುವುದಕ್ಕೆ ಸಾಕಷ್ಟು ವಿಷಯಗಳಿವೆ. ಇದನ್ನೆಲ್ಲ ಯಾವ ಪುರುಷಾರ್ಥಕ್ಕೆ ಮಾಡುತ್ತಿದ್ದಾರೆ ಗೊತ್ತಿಲ್ಲ ಎಂದು ಅಸಮಾಧಾನವ್ಯಕ್ತಪಡಿಸಿದ್ದಾರೆ. : ---- --