ಸಿಎಂ ಬಿಎಸ್ ವೈ ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು- ರೈತಮುಖಂಡ ಬಡಗಲಪುರ ನಾಗೇಂದ್ರ ಆಗ್ರಹ… ಬೆಂಗಳೂರು,ಮಾರ್ಚ್,22,2021(..):ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನಾ ಸಮಾವೇಶ ನಡೆಯುತ್ತಿದ್ದು, ಈ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಆಗ್ರಹಿಸಿದರು. ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರೈತರ ಸಮಾವೇಶ ನಡೆಯುತ್ತಿದೆ. ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಬಡಗಲಪುರ ನಾಗೇಂದ್ರ, ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು. ಮಾರ್ಚ್ 26 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಇಂದಿನ ಸಭೆಯಲ್ಲಿ ಹಲವು ನಿರ್ಣಯಗಳನ್ನ ಕೈಗೊಳ್ಳುತ್ತೇವೆ ಎಂದರು. : - –- -