ಕೊರೊನಾ ಎರಡನೇ ಅಲೆ, ಹೊರಗುತ್ತಿಗೆ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ : ಸಚಿವ ಡಾ.ಸುಧಾಕರ್ ಆದೇಶ ಬೆಂಗಳೂರು,ಮಾರ್ಚ್,21,2021(..): ಕೊರೊನಾ ಎರಡನೇ ಅಲೆ ಹಿನ್ನಲೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ ಮಾಡಿ ವೈದ್ಯಕೀಯ ಸಚಿವ ಡಾ.ಸುಧಾಕರ್ ಆದೇಶ ಹೊರಡಿಸಿದ್ದಾರೆ.ಕೊರೊನಾ ನಿಯಂತ್ರಣಾ ಕಾರ್ಯಕ್ಕಾಗಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನೇಮಕವಾಗಿದ್ದ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿಗಳ 6ತಿಂಗಳ ಸೇವಾವಧಿ ವಿಸ್ತರಿಸಿದ್ದಾರೆ. ಏ.1 ರಿಂದ ಸೆ.30 ರವರೆಗೆ ಸೇವಾವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. : ’-------. -