“ಕಾಂಗ್ರೆಸ್ ನಾಯಕರ ಆಟ ಈಗ ನಡೆಯಲ್ಲ” : ಸಚಿವ ಬಿ.ಶ್ರೀರಾಮುಲು ವಾಗ್ದಾಳಿ ಬೆಂಗಳೂರು,ಮಾರ್ಚ್,13,2021(..) :ಕಾಂಗ್ರೆಸ್ ನಾಯಕರ ಆಟ ಈಗ ನಡೆಯಲ್ಲ. ಬಜೆಟ್ ಸೇರಿದಂತೆ ಯಾವುದೇ ಚರ್ಚೆಗೆ ಬಾರದೇ ಓಡುತ್ತಿದ್ದಾರೆ. ಈಗ ಭದ್ರಾವತಿಯಲ್ಲೀ ಹೋರಾಟ ಮಾಡಲು ಹೊರಟಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ಖಂಡಿಸಿ ಕಾಂಗ್ರೆಸ್ ನಾಯಕರು ಶಿವಮೊಗ್ಗ ಚಲೋ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಕಾಂಗ್ರೆಸ್ ನವರು ಶಿವಮೊಗ್ಗವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್ ನಾಯಕರ ಆಟ ಈಗ ನಡೆಯಲ್ಲ. ಬಜೆಟ್ ಸೇರಿದಂತೆ ಯಾವುದೇ ಚರ್ಚೆಗೆ ಬಾರದೇ ಓಡುತ್ತಿದ್ದಾರೆ. ಈಗ ಭದ್ರಾವತಿಯಲ್ಲೀ ಹೋರಾಟ ಮಾಡಲು ಹೊರಟಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಗುಡುಗಿದರು. ಕಾಂಗ್ರೆಸ್ ನಾಯಕರು ಶಿವಮೊಗ್ಗವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಇನ್ನು ಗಲಾಟೆ ಪ್ರಕರಣದಲ್ಲಿ ಸಂಗಮೇಶ್ ಪುತ್ರನ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಇನ್ನು ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಪ್ರತಿಕ್ರಿಯಿಸಿ, ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸವಿದೆ ಎಂದು ಹೇಳಿದರು. : ---- --.