ಸಿಡಿ ಪ್ರಕರಣ ಎಸ್ ಐಟಿ ತನಿಖೆ ಬಗ್ಗೆ ನಾನು ಏನು ಮಾತನಾಡಲ್ಲ- ಗೃಹ ಸಚಿವ ಬಸವರಾಜ ಬೊಮ್ಮಾಯಿ…. ಬೆಂಗಳೂರು,ಮಾರ್ಚ್,13,2021(..): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಸುತ್ತಿದೆ. ಹೀಗಾಗಿ ತನಿಖೆ ಬಗ್ಗೆ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿಡಿ ವಿಚಾರ ಕುರಿತು ಎಸ್ ಐಟಿ ತನಿಖೆ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಿಡಿ ಪ್ರಕರಣ ತನಿಖೆ ನಡೆಸಲು ನಡೆಸಲು ಎಸ್.ಐಟಿಗೆ ಸಂಪೂರ್ಣ ಸ್ವಾತಂತ್ರ ನೀಡಲಾಗಿದೆ. ತನಿಖೆ ನಡೆಯುತ್ತಿರುವ ಹಿನ್ನೆಲೆ ಈ ಬಗ್ಗೆ ಮಾತನಾಡಲ್ಲ ಎಂದರು. ಪ್ರಕರಣ ಕುರಿತು ರಮೇಶ್ ಜಾರಕಿಹೊಳಿ ದೂರು ನೀಡುವ ವಿಚಾರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿರಾಕರಿಸಿದರು. : – - – - -