ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಂಘರ್ಷದಿಂದ ದಲಿತ ಶಾಸಕನಿಗೆ ಅನ್ಯಾಯ : ರಾಜ್ಯ ಬಿಜೆಪಿ ಟ್ವೀಟ್ ಬೆಂಗಳೂರು,ಮಾರ್ಚ್,11,2021(..) :ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವಿನ ಸಂಘರ್ಷದಿಂದ ದಲಿತ ಶಾಸಕನಿಗೆ ಅನ್ಯಾಯವಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಟೀಕಿಸಿದೆ. ವಲಸೆ ನಾಯಕ ಸಿದ್ದರಾಮಯ್ಯ ಅವರು ಸಂತ್ರಸ್ತ ಶಾಸಕ ಅಖಂಡ ಪರವಾಗಿ ನಿಂತರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಲಭೆಯ ಆರೋಪಿ ಸಂಪತ್‌ ರಾಜ್‌ ಪರವಾಗಿ ನಿಂತರು. ಇವರಿಬ್ಬರ ನಡುವಿನ ಸಂಘರ್ಷದಿಂದ ದಲಿತ ಶಾಸಕನಿಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಗಲಭೆಯ ಆರೋಪಿಗೆ ಬಹಿರಂಗ ಬೆಂಬಲ ನೀಡಿದೆ ಎಂದು ಕಿಡಿಕಾರಿದೆ. : -..-------