ಲಾ ಬುಕ್ ನಲ್ಲಿ ಏನಿದೆಯೋ ಅದರ ಪ್ರಕಾರ ತನಿಖೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ…. ಬೆಂಗಳೂರು,ಮಾರ್ಚ್,9,2021(..):ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಲಾ ಬುಕ್ ನಲ್ಲಿ ಏನಿದೆಯೋ ಅದರ ಪ್ರಕಾರ ತನಿಖೆ ನಡೆಯುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ದೂರು ದಾಖಲಾದ ದಿನದಿಂದ ಎಲ್ಲವನ್ನೂ ಗಮನಿಸುತ್ತಿದ್ದೇವೆ. . ಲಾ ಬುಕ್ ನಲ್ಲಿ ಏನಿದೆಯೀ ಅದರ ಪ್ರಕಾರ ನಡೆಯುತ್ತೇವೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ ಎಂದರು. ರಮೇಶ್ ಜಾರಕಿಹೊಳಿ ಹೇಳಿದಂತೆ 2+4+3 ಬಗ್ಗೆ ಗೊತ್ತಿಲ್ಲ. ಸಿಎಂ ಜತೆ ಕೂಡ ಚರ್ಚೆ ಮಾಡಿ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. : --- – - - .