“ತೋಟಗಾರಿಕಾ ಬೆಳೆಗಳ ರಫ್ತಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣಗಳಲ್ಲಿ ಪೂರಕ ಸೌಲಭ್ಯ” ಬೆಂಗಳೂರು,ಮಾರ್ಚ್,08,2021(..) :ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣಗಳಲ್ಲಿ ಪೂರಕ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಿಎಂ ಬಿ.ಎಸ್.ವೈ ತಿಳಿಸಿದ್ದಾರೆ.ದ್ರಾಕ್ಷಿ ಕೃಷಿಯ ಉತ್ತೇಜನಕ್ಕೆ ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ ರಚಿಸಲು ಕ್ರಮ. 5 ವರ್ಷಗಳಲ್ಲಿ 75 ಕೋಟಿ ರೂ ವೆಚ್ಚದದಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ, ಇದಕ್ಕೆ 10 ಕೋಟಿ ರೂ. ಅನುದಾನ ನೀಡುವುದಾಗಿ ಹೇಳಿದರು. ಚಾಮರಾಜನಗರದಲ್ಲಿ ಅರಶಿನ ಮಾರುಕಟ್ಟೆ ಚಾಮರಾಜನಗರದಲ್ಲಿ ಅರಶಿನ ಮಾರುಕಟ್ಟೆ ನಿರ್ಮಾಣ. ರಾಜ್ಯದ ಪೂರ್ವ ಪ್ರಸ್ಥಭೂಮಿ ಪ್ರದೇಶದಲ್ಲಿ ಅಳಿವಿನಂಚಿನಲ್ಲಿರುವ ಲೆಸ್ಸರ್ ಫ್ಲೋರಿಕನ್ ಪಕ್ಷಿ ಪ್ರಬೇಧ ಸಂರಕ್ಷಣೆಗೆ 50 ಲಕ್ಷ ರೂ. ಒದಗಿಸಲಾಗಿದೆ. ಬಳ್ಳಾರಿಯ ಕುಡುತಿನಿ ಬೂದಿ ದಿಬ್ಬವನ್ನು 50 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಬಜೆಟ್ ಮಂಡನೆಯಲ್ಲಿ ಪ್ರಸ್ತಾಪಿಸಿದ್ದಾರೆ. : -------