“ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ” : ಬಜೆಟ್ ನಲ್ಲಿ ಘೋಷಣೆ ಬೆಂಗಳೂರು,ಮಾರ್ಚ್,08,2021(..) :ಕೈಗಾರಿಕಾ ಕಾರಿಡಾರ್ ಗಳ ಅಭಿವೃದ್ಧಿ, ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರತ್ಯೇಕ ತೆರಿಗೆ ಸ್ಲ್ಯಾಬ್ ನೀತಿ, ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.234 ಕೆರೆ ತುಂಬಿಸುವ ಯೋಜನೆಗೆ 500 ಕೋಟಿ ರೂ. 234 ಕೆರೆ ತುಂಬಿಸುವ ಯೋಜನೆಗೆ 500 ಕೋಟಿ ರೂಪಾಯಿ, ಶೋಷಿತ ಸಮುದಾಯಗಳ ಅಭಿವೃದ್ಧಿಗೆ 500 ಕೋಟಿ ರೂಪಾಯಿ. ತಾಯಂದಿರ ಎದೆಹಾಲು ಬ್ಯಾಂಕ್ ಸ್ಥಾಪನೆ, ಭೂಸ್ವಾಧೀನ ಪ್ರಕ್ರಿಯೆಗೆ ಸರ್ಕಾರದ ನೆರವಿನ ಘೋಷಣೆ. ಅನುಭವ ಮಂಟಪಕ್ಕೆ 500 ಕೋಟಿ ರೂಪಾಯಿ. ರೈಲ್ವೆ ಯೋಜನೆಗಳ ಭೂಸ್ವಾಧಿನಕ್ಕಾಗಿ 2,260 ಕೋಟಿ ರೂ. ರೈಲ್ವೆ ಯೋಜನೆಗಳಿಗೆ 3,991 ಕೋಟಿ ರೂಪಾಯಿ ಅನುದಾನ, ರೈಲ್ವೆ ಯೋಜನೆಗಳ ಭೂಸ್ವಾಧಿನಕ್ಕಾಗಿ 2,260 ಕೋಟಿ ರೂಪಾಯಿ. ಮಲೆನಾಡು, ಕರಾವಳಿಯಲ್ಲಿ ಕಾಲುಸಂಕ ನಿರ್ಮಾಣಕ್ಕೆ 100 ಕೋಟಿ ರೂಪಾಯಿ, ಜ್ಯೋತಿ ಸಂಜೀವಿನಿ ಅಡಿ ಉಚಿತ ಶಸ್ತ್ರಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. : ----