ತನ್ವೀರ್ ಸೇಠ್ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಹೈಕಮಾಂಡ್ ಗೆ ದೂರು : ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಬೆಂಗಳೂರು,ಫೆಬ್ರವರಿ,28,2021(..) : ಕೆಪಿಸಿಸಿ ಅಧ್ಯಕ್ಷರು ಶಾಸಕ ತನ್ವೀರ್ ಸೇಠ್ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಹೈಕಮಾಂಡ್ ಗೆ ದೂರು ನೀಡಲು ಚಿಂತನೆ ನಡೆಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಪಾಲಿಕೆ ಮೇಯರ್ ಚುನಾವಣೆಯಲ್ಲಿ ಜೆಡಿಎಸ್,ಕಾಂಗ್ರೆಸ್ ಮೈತ್ರಿ ಕುರಿತಂತೆ ಶಾಸಕ ತನ್ವೀರ್ ಸೇಠ್ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ನನ್ನ ವಿರುದ್ಧ ನನ್ನ ಕ್ಷೇತ್ರದಲ್ಲಿಯೇ ರಾಜಕೀಯ ಮೇಲಾಟ ನನ್ನ ವಿರುದ್ಧ ನನ್ನ ಕ್ಷೇತ್ರದಲ್ಲಿಯೇ ರಾಜಕೀಯ ಮೇಲಾಟ. ಅವರು ಹೀಗೆ ಮಾಡಿದರೂ ನಾನು ಸುಮ್ಮನೆ ಇರಬೇಕ ಎಂದು ತನ್ವೀರ್ ಸೇಠ್ ವಿರುದ್ಧ ಕಿಡಿಕಾರಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ತನ್ವೀರ್ ಸೇಠ್ ವಿರುದ್ಧ ಕ್ರಮಕೈಗೊಳ್ಳದಿದ್ದರೆ ನವದೆಹಲಿಗೆ ಹೋಗಿ ಹೈಕಮಾಂಡ್ ಗೆ ದೂರು ನೀಡುವ ಚಿಂತನೆಯನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. : -- - -- -