ಬಿಸಿಯೂಟ ಆರಂಭಕ್ಕೆ ಕೇಂದ್ರ ಸರ್ಕಾರದ ಸಮ್ಮತಿ ಸಿಕ್ಕಿಲ್ಲ : ಸಚಿವ ಎಸ್.ಸುರೇಶ್ ಕುಮಾರ್ ಬೆಂಗಳೂರು,ಫೆಬ್ರವರಿ,28,2021(..) :ಬಿಸಿಯೂಟ ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧವಾಗಿದ್ದರೂ, ಕೇಂದ್ರ ಸರ್ಕಾರದ ಸಮ್ಮತಿ ಸಿಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬಿಸಿಯೂಟ ಯೋಜನೆ ಆರಂಭಿಸಲು ಸಿದ್ಧತೆ ರಾಜ್ಯದಲ್ಲಿ ಶಾಲೆಗಳು ವಿಳಂಬವಾಗಿ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯ ಮಕ್ಕಳು ಶಾಲೆಗೆ ಆಗಮಿಸತೊಡಗಿದ್ದಾರೆ. ಆದರೆ, ಬಿಸಿಊಟ ಇಲ್ಲದ ಕಾರಣ ಅನೇಕ ಮಕ್ಕಳಿಗೆ ತೊಂದರೆಯಾಗಿದೆ. ಶಿಕ್ಷಣ ಇಲಾಖೆ ಬಿಸಿಯೂಟ ಯೋಜನೆ ಆರಂಭಿಸಲು ಸಿದ್ಧತೆ ನಡೆಸಿದ್ದರೂ ಕೂಡ ಇನ್ನೂ ಅನುಮತಿ ನೀಡಿಲ್ಲ ಎನ್ನಲಾಗಿದೆ. ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ 1 ರಿಂದ ತರಗತಿ ಆರಂಭಿಸಲು ಸಮ್ಮತಿಸಿಲ್ಲ ಎಂದು ತಿಳಿಸಿದ್ದಾರೆ. : -- - --.