ಕೋರ್ಟ್ ಆವರಣದಲ್ಲೇ ವಕೀಲರೊಬ್ಬರ ಬರ್ಬರ ಹತ್ಯೆ: ಬೆಚ್ಚಿಬಿದ್ಧ ಜನತೆ…. ಬಳ್ಳಾರಿ,ಫೆಬ್ರವರಿ,27,2021(..): ಕೊರ್ಟ್ ಆವರಣದಲ್ಲಿ ವಕೀಲರೊಬ್ಬರನ್ನ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ತಾರಿಹಳ್ಳಿ ವೆಂಕಟೇಶ್ ಕೊಲೆಯಾದ ವಕೀಲ. ಆಸ್ತಿ ವಿವಾದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಂದಲೇ ಕೊಲೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಕೋರ್ಟ್ ಆವರಣದಲ್ಲೇ ವಕೀಲ ತಾರಿಹಳ್ಳಿ ವೆಂಕಟೇಶ್ ಮೇಲೆ ಲಾಂಗ್ ನಿಂದ ಹಲ್ಲೆಗೈದು ಕೊಲೆ ಮಾಡಲಾಗಿದೆ. ಈ ಕೊಲೆಯಿಂದಾಗಿ ಅಲ್ಲಿದ್ಧವರು ಬೆಚ್ಚಿ ಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ಹೊಸಪೇಟೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ. : – – -